ಗೃಹಲಕ್ಷ್ಮಿ ಆರಂಭವಾಗಿದ್ದು ಆಗಸ್ಟ್ ತಿಂಗಳಲ್ಲಿ. ಆಗಸ್ಟ್ ತಿಂಗಳಲ್ಲಿ ಹಣ ಬಂದಿದ್ದೇ ಕೊನೆ, ಇದೂವರೆಗೆ ಎರಡನೇ ಕಂತು ಬಂದಿಲ್ಲ. ಸೆಪ್ಟೆಂಬರ್ ತಿಂಗಳಲ್ಲಿ ಹಣ ಹಾಕುವ ಪ್ರಕ್ರಿಯೆಯೇ ಆರಂಭವಾಗಿಲ್ಲ. ಅಕ್ಟೋಬರ್ ತಿಂಗಳ ಲೆಕ್ಕವೂ ಆಗುತ್ತಿದೆ. ಹೆಚ್ಚೂ ಕಡಿಮೆ ಅರ್ಧ ತಿಂಗಳು ಕಳೆದೂ ಹೋಗಿದೆ. ಈಗಿನ ಲೆಕ್ಕದ ಪ್ರಕಾರ ಸರ್ಕಾರ ಎರಡು ತಿಂಗಳ ಹಣ ಬಿಡುಗಡೆ ಮಾಡಬೇಕು. ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಿನದ್ದು. ಆದರೆ ಎರಡನೇ ಕಂತಿನ ಹಣವೇ ಬಂದಿಲ್ಲ. ಯಾವಾಗ ಅನ್ನೋ ಪ್ರಶ್ನೆ ಎಲ್ಲರನ್ನೂ ಕಾಡ್ತಾ ಇದೆ.
ಅಕ್ಟೋಬರ್ 4 ರವರೆಗೆ 93 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲಾ 2 ಸಾವಿರ ರೂ. ಯಶಸ್ವಿಯಾಗಿ ವರ್ಗಾಯಿಸಲಾಗಿದೆ. 5.5 ಲಕ್ಷ ಫಲಾನುಭವಿಗಳ ಮಾಹಿತಿ ಪರಿಶೀಲಿಸಿ ಡಿಬಿಟಿ ಮೂಲಕ ಹಣ ಪಾವತಿಸಲು ಕ್ರಮ ವಹಿಸಲಾಗಿದೆ. ಆಧಾರ್ ಮತ್ತು ಬ್ಯಾಂಕ್ ಖಾತೆ ಜೋಡಣೆಯಲ್ಲಿ ವ್ಯತ್ಯಾಸ ಮತ್ತಿತರ ಕಾರಣಕ್ಕೆ ‘ಗೃಹಲಕ್ಷ್ಮಿ’ ಗ್ಯಾರಂಟಿ ಯೋಜನೆಯಡಿ ಈವರೆಗೆ 9,44,155 ಅರ್ಜಿದಾರರಿಗೆ ಹಣ ಹೋಗಿಲ್ಲ. 3,082 ಅರ್ಜಿದಾರರು ಮರಣ ಹೊಂದಿದ್ದರಿಂದ ಅವರನ್ನು ಅನರ್ಹಗೊಳಿಸಲಾಗಿದೆ. 1,59,356 ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. ಫಲಾನುಭವಿಗಳ ಆಧಾರ್ ಹಾಗೂ ಬ್ಯಾಂಕ್ ಖಾತೆ ಹೆಸರಿನಲ್ಲಿ ವ್ಯತ್ಯಾಸವಾಗಿದ್ದು, ಅವುಗಳನ್ನು ಸರಿಪಡಿಸುವ ಕಾರ್ಯ ನಡೆದಿದೆ. 1,75,683 ಫಲಾನುಭವಿಗಳ ಹೆಸರು ಮತ್ತು ವಿಳಾಸ ವ್ಯತ್ಯಾಸವಾಗಿದೆ. ಬ್ಯಾಂಕ್ಗಳ ಮೂಲಕ ಫಲಾನುಭವಿಗಳ ಇ-ಕೆವೈಸಿ ಮಾಡಿಸಲು ಇಲಾಖೆ ಕ್ರಮ ವಹಿಸಿದೆ. 9,766 ದತ್ತಾಂಶ ಸಮಸ್ಯೆಯಿಂದ ಉಂಟಾದ ವಿಳಂಬವನ್ನು ಸೇವಾಸಿಂಧು ಆ್ಯಪ್ ಮೂಲಕ ಪುನರ್ ಪರಿಶೀಲಿಸಲಾಗುತ್ತಿದೆ. ಅಕ್ಟೋಬರ್ 4 ರವರೆಗೆ 93 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲಾ 2 ಸಾವಿರ ರೂ. ಯಶಸ್ವಿಯಾಗಿ ವರ್ಗಾಯಿಸಲಾಗಿದೆ. 5.5 ಲಕ್ಷ ಫಲಾನುಭವಿಗಳ ಮಾಹಿತಿ ಪರಿಶೀಲಿಸಿ ಡಿಬಿಟಿ ಮೂಲಕ ಹಣ ಪಾವತಿಸಲು ಕ್ರಮ ವಹಿಸಲಾಗಿದೆ ಇದಿಷ್ಟೂ ವಿವರವನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ್ದಾರೆ.
ಬಿಡುಗಡೆ ಮಾಡುತ್ತೇವೆ ಎನ್ನುತ್ತಿದ್ದರೂ ಯಾವಾಗ.. ಅನ್ನೋ ಪ್ರಶ್ನೆಗೆ ಖಚಿತ ಉತ್ತರ ಕೊಟ್ಟಿಲ್ಲ. ದಿನಾಂಕ ಘೋಷಿಸಿಲ್ಲ. 1.8 ಕೋಟಿ ಅರ್ಹ ಫಲಾನುಭವಿಗಳಿಗೆ 2169 ಕೋಟಿ ರೂ. ಅನುದಾನವನ್ನು ಸರಕಾರ ಬಿಡುಗಡೆಗೊಳಿಸಿತ್ತು. ಸೆಪ್ಟಂಬರ್ ತಿಂಗಳಲ್ಲಿ 1.14 ಲಕ್ಷ ಫಲಾನುಭವಿಗಳಿಗೆ 2280 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲಾಗಿದೆ. ಆದರೆ ಯಾವ ದಿನ ರಿಲೀಸ್ ಮಾಡ್ತೇವೆ ಅನ್ನೋ ಪ್ರಶ್ನೆಗೆ ಡೇಟ್ ಹೇಳಿಲ್ಲ. ಎರಡೂ ತಿಂಗಳ ಬಾಕಿಯನ್ನೂ ಒಟ್ಟಿಗೇ ಹಾಕ್ತೀರಾ ಅನ್ನೋ ಪ್ರಶ್ನೆಗೂ ಲಕ್ಷ್ಮೀ ಹೆಬ್ಬಾಳ್ಕರ್ ಉತ್ತರ ಕೊಟ್ಟಿಲ್ಲ.
ಗೃಹಲಕ್ಷ್ಮಿ ನೋಂದಣಿಯಾಗಿದ್ದವರ ಪೈಕಿ ಸಾಕಷ್ಟು ಮಹಿಳೆಯರಿಗೆ ಹಣವೇ ಬಂದಿಲ್ಲ. ಈ ಬಗ್ಗೆ ಅರ್ಜಿ ಸಲ್ಲಿಸಿದ ಮಹಿಳೆಯರು ಬೇಸರಗೊಂಡಿದ್ದಾರೆ. ಸರ್ಕಾರ ಮೋಸ ಮಾಡಿದೆ ಎಂದು ಕಿಡಿಕಾರಿದೆ. ಇನ್ನು ಮಹಿಳೆಯರು ನಿತ್ಯ ಗ್ರಾಮ್ ಒನ್, ಕರ್ನಾಟಕ ಒನ್ ಕೇಂದಗಳಿಗೆ ತೆರಳಿ ಅಲ್ಲಿನ ಸಿಬ್ಬಂದಿಗೆ ವಿಚಾರಣೆ ನಡೆಸುತ್ತಿದ್ದಾರೆ.



