ಈಶ್ವರಪ್ಪ. ಬಿಜೆಪಿಯಲ್ಲಿ ಬಂಡಾಯ ಎದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧೆಗೆ ಇಳಿದಿರುವುದು ಗೊತ್ತೇ ಇದೆ. ನನ್ನ ಹೋರಾಟ ಯಡಿಯೂರಪ್ಪ ಮತ್ತವರ ಕುಟುಂಬದ ವಿರುದ್ಧ. ಬಿಜೆಪಿ ವಿರುದ್ಧ ಅಲ್ಲ ಎನ್ನುತ್ತಿರುವ ಈಶ್ವರಪ್ಪ ನಾಮಪತ್ರ ಸಲ್ಲಿಕೆ ವೇಳೆ ಡೂಪ್ಲಿಕೇಟ್ ಮೋದಿಯ ಜೊತೆಗೆ ನಿಂತುಕೊಂಡು ಪ್ರಚಾರ ಮಾಡಿದ್ಧಾರೆ. ಬಿ.ವೈ.ರಾಘವೇಂದ್ರ ನಾಮಪತ್ರ ವಾಪಸ್ ತೆಗೆದುಕೊಳ್ಳಬೇಕು ಹಾಗೂ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಯಬೇಕು ಎನ್ನುವುದು ಈಶ್ವರಪ್ಪ ಅವರ ಡಿಮ್ಯಾಂಡ್. ಹೀಗಾಗಿಯೇ ಈಶ್ವರಪ್ಪ ಅವರ ಅಟ್ಯಾಕ್ ವಿಜಯೇಂದ್ರ ಅವರ ಮೇಲೆ.
ಬಿಜೆಪಿ ರಾಜ್ಯಾಧ್ಯಕ್ಷನಾಗಲು ನಿನಗೇನು ಯೋಗ್ಯತೆಯಿದೆ? ನಿಮ್ಮಪ್ಪನ ಶ್ರಮದಿಂದ ನೀನು ರಾಜ್ಯಾಧ್ಯಕ್ಷ ಆಗಿದ್ದೀಯ. ಇದನ್ನು ನೆನಪು ಇಟ್ಟುಕೊಂಡು ಮಾತನಾಡಬೇಕು. 40 ವರ್ಷಗಳ ಕಾಲ ತಪಸ್ಸು ಮಾಡಿದ್ದೇನೆ ಈ ಪಕ್ಷಕ್ಕೋಸ್ಕರ. ನನಗೆ ಟೀಕೆ ಮಾಡುವಷ್ಟು ಯೋಗ್ಯತೆ ನಿಮಗಿಲ್ಲ ಎಂದಿರುವ ಈಶ್ವರಪ್ಪ ರಾಜ್ಯದಲ್ಲಿ ಪುಕ್ಸಟ್ಟೆ ಮಾತು ಹಾಗೂ ವಿಜಯೇಂದ್ರನ ಮಾತುಗಳಿಗೆ ನಾನು ಕೂಡ ಬೆಲೆ ಕೊಡುವುದಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಆಗುವುದಕ್ಕೆ ನಿನಗೇನು ಯೋಗ್ಯತೆ ಇದೆ ಎಂದು ನಾನು ಕೇಳುತ್ತೇನೆ. ನಾನು 40 ವರ್ಷಗಳ ಕಾಲ ನಾನು ಈ ಪಕ್ಷಕ್ಕಾಗಿ ಶ್ರಮ ಹಾಕಿದ್ದೀನಿ. ನಿಮ್ಮಪ್ಪ ಪಕ್ಷಕ್ಕಾಗಿ ಶ್ರಮ ಹಾಕಿದ್ದಾರೆಂಬ ಹಿನ್ನೆಲೆಯಲ್ಲಿ ನೀನು ರಾಜ್ಯಾಧ್ಯಕ್ಷ ಆಗಿದ್ದೀಯ. ನೀನು ಈ ರೀತಿ ಮಾತನಾಡುವುದಕ್ಕೆ ನಿನಗೆ ಯೋಗ್ಯತೆಯೇ ಇಲ್ಲ. ಶಿವಮೊಗ್ಗ ನಗರಕ್ಕೆ ಮತ್ತು ಜಿಲ್ಲೆಯ ಜನತೆಗೆ ನಾನೇನು ಮಾಡಿದ್ದೇನೆ ಎಂಬುದು ಗೊತ್ತಿದೆ ಎಂದಿದ್ದಾರೆ.
ಶಿಕಾರಿಪುರದಲ್ಲಿ 60 ಸಾವಿರ ಇದ್ದ ಲೀಡ್ ಈಗ 10 ಸಾವಿರಕ್ಕೆ ಬಂದು ಇಳಿದಿದೆ. ಮುಂದಿನ ಚುನಾವಣೆಯಲ್ಲಿ ಗೊತ್ತಾಗುತ್ತದೆ ನಿನ್ನ ಹಣೆಬರಹ. ತಿಣಿಕಿ ತಿಣಿಕಿ 10 ಸಾವಿರ ವೋಟ್ ಲೀಡ್ ಪಡೆದುಕೊಂಡಿದ್ದೀಯ. ಇದಕ್ಕಾಗಿ ನೀನು ಎಷ್ಟು ಕೋಟಿ ಖರ್ಚು ಮಾಡಿದ್ದೀಯ ಎಂದು ಗೊತ್ತಿಲ್ಲ. ಹಂಗಾಗಿ ಹಗುರವಾಗಿ ಮಾತನಾಡಿದರೆ ನಾನು ಬೇರೆ ಭಾಷೆಯಲ್ಲಿ ಮತ್ತೆ ಉತ್ತರ ಕೊಡಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
ಶಿಸ್ತು ಕ್ರಮ ತೆಗೆದುಕೊಳ್ಳುತ್ತೇನೆ ಎಂದು ವಿಜಯೇಂದ್ರ ಹೇಳಿಕೆ ಕೊಟ್ಟಿದ್ದೇ ಇದಕ್ಕೆಲ್ಲ ಕಾರಣ. ಶಿಸ್ತು ಕ್ರಮ ಏನು ತೆಗೆದುಕೊಳ್ತೀಯ..? ನಾನು ಬಿಜೆಪಿ ಬಿಟ್ಟು ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ದೇನೆ ಎಂಬ ಅರ್ಥವೂ ರಾಜ್ಯಾಧ್ಯಕ್ಷನಿಗೆ ಗೊತ್ತಿಲ್ಲ. ನಾನು ಪಕ್ಷದಿಂದಲೇ ಹೊರಗೆ ಬಂದು ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತಿದ್ದೇನೆ. ನಾನು ಬಿಜಪಿ ಪಕ್ಷದಲ್ಲಿಯೇ ಇಲ್ಲವೆಂದಾಗ ನೀನೇನು ಕ್ರಮ ತಗೋತಿಯೋ ತಗೋ.. ಇಂತಃ ಗೊಡ್ಡು ಬೆದರಿಕೆಗೆ ನಾನು ಹೆದರಲ್ಲ ಎಂದಿದ್ಧಾರೆ.
ನೀನಿನ್ನೂ ಬಚ್ಚಾ.. ನಿಮ್ಮಪ್ಪನ ಶ್ರಮದಿಂದ ರಾಜ್ಯಾಧ್ಯಕ್ಷ ಆಗಿದ್ದೀಯ. ಇದನ್ನು ನೆನಪು ಇಟ್ಟುಕೊಂಡು ಮಾತನಾಡಬೇಕು. 40 ವರ್ಷಗಳ ಕಾಲ ತಪಸ್ಸು ಮಾಡಿದ್ದೇನೆ ಈ ಪಕ್ಷಕ್ಕೋಸ್ಕರ. ನನಗೆ ಟೀಕೆ ಮಾಡುವಷ್ಟು ಯೋಗ್ಯತೆ ನಿಮಗಿಲ್ಲ. ರಾಜ್ಯಾಧ್ಯಕ್ಷನಾಗಲು ಅಲ್ಲಿ ಹೋಗಿ 6 ತಿಂಗಳುಗಟ್ಟಲೆ ಕುಳಿತುಕೊಂಡು ಮೇಲಿನವರಿಗೆ ಒತ್ತಡ ಕೊಟ್ಟು ಅಧ್ಯಕ್ಷನಾಗಿಬಿಟ್ಟರೆ ನಿನಗೆ ಬಾಯಿಗೆ ಬಂದಂತೆ ಮಾತನಾಡಲು ಅವಕಾಶ ಕೊಟ್ಟಿದ್ದೇನೆ ಎಂದುಕೊಂಡಿದ್ದೀಯಾ? ಹುಷಾರ್ ಆಗಿರು ಎಂದು ವಾರ್ನಿಂಗ್ ಮಾಡಿದ್ಧಾರೆ.
ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಮಂತ್ರಿ ಆಗುವುದು ನನ್ನ ಉದ್ದೇಶವಾಗಿದೆ. ಅಲ್ಲಿ ಕೇಂದ್ರದಲ್ಲಿ ಸೋನಿಯಾಗಾಂಧಿ, ರಾಹುಲ್ಗಾಂಧಿ ಕುಟುಂಬ ರಾಜಕಾರಣವೇನಿದೆ ಅದನ್ನು ವಿರೋಧಿಸುತ್ತೇನೆ ಎಂದು ನರೇಂದ್ರ ಮೋದಿ ಅವರು ಹೇಳುತ್ತಿದ್ದಾರೆ. ಆದರೆ, ಇಲ್ಲಿ ಅಪ್ಪ-ಮಕ್ಕಳು ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.



